ಹಿರಿಯೂರು: ನಗರದ ಹುಳಿಯಾರು ರಸ್ತೆಗೆ ಹೊಂದಿಕೊಂಡಿರುವ ಓಂ ಶಕ್ತಿ ಅರ್ಧನಾರೀಶ್ವರಿ ಕರುಮಾರಿಯಮ್ಮ ದೇವಾಲಯದಲ್ಲಿ ಗುರುವಾರ ವರ್ಧಂತಿ ಮಹೋತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಚಂಡಿಕಾ ಪಾರಾಯಣ, ಮೃತ್ಯುಂಜಯ, ಸುಬ್ರಹ್ಮಣ್ಯ, ಅನ್ನಪೂರ್ಣೇಶ್ವರಿ, ಕಾಲಭೈರವ, ವೆಂಕಟೇಶ್ವರ, ದುರ್ಗಾ ಹೋಮ, ಮಹಾ ಪೂರ್ಣಾಹುತಿ ನಡೆಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.