ಪರಶುರಾಂಪುರ: ಗ್ರಾಮದ ಹಳೆಕೆರೆ ಬಳಿ ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಹುಡಗ-ಹುಡುಗಿ ಜಗಳವಾಡುತ್ತಿದ್ದುದ್ದನ್ನು ಬಿಡಿಸಲು ಹೋದ ಬೋರೇಶ (35) ಅವರ ತಲೆಯ ಹಿಂಬದಿಗೆ ದೊಡ್ಡಗೊಲ್ಲರಹಟ್ಟಿಯ ದರ್ಶನ್ (20) ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
ಹಲ್ಲೆಗೊಳಗಾದ ಬೋರೇಶ ದೊಡ್ಡಉಳ್ಳಾರ್ಥಿ ನಿವಾಸಿಯಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗಿದೆ.
ಆರೋಪಿ ದರ್ಶನ್ ವಿರುದ್ಧ ಪರಶುರಾಂಪುರ ಠಾಣೆಯಲ್ಲಿ ದಾಖಲಾಗಿದೆ. ಪರಶುರಾಂಪುರ ಪೋಲಿಸರು ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.