ADVERTISEMENT

ಹಿರಿಯೂರು | ತೋಟಕ್ಕೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 15:44 IST
Last Updated 16 ಏಪ್ರಿಲ್ 2024, 15:44 IST
ಹಿರಿಯೂರು ತಾಲ್ಲೂಕಿನ ಅಂಬಲಗೆರೆ ಗ್ರಾಮದ ಮಹಾಂತೇಶ್ ಅವರ ತೋಟದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ನೂರಾರು ಅಡಿಕೆ ಮತ್ತು ಬಾಳೆ ಗಿಡಗಳು ಸುಟ್ಟು ಹೋಗಿವೆ
ಹಿರಿಯೂರು ತಾಲ್ಲೂಕಿನ ಅಂಬಲಗೆರೆ ಗ್ರಾಮದ ಮಹಾಂತೇಶ್ ಅವರ ತೋಟದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ನೂರಾರು ಅಡಿಕೆ ಮತ್ತು ಬಾಳೆ ಗಿಡಗಳು ಸುಟ್ಟು ಹೋಗಿವೆ   

ಹಿರಿಯೂರು: ತಾಲ್ಲೂಕಿನ ಅಂಬಲಗೆರೆ ಗ್ರಾಮದ ಮಹಾಂತೇಶ್ ಅವರ ತೋಟದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ನೂರಾರು ಅಡಿಕೆ ಮತ್ತು ಬಾಳೆ ಗಿಡಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಹುಲಗಲಕುಂಟೆ ಗ್ರಾಮ: ತಾಲ್ಲೂಕಿನ ಹುಲುಗಲಕುಂಟೆ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಗಿರೀಶ್ ಅವರ  ತೋಟದಲ್ಲಿನ ಕಾಲು ಎಕರೆ  ಕನಕಾಂಬರ ಗಿಡಗಳು, 3 ತೆಂಗಿನ ಮರಗಳು, ಸಣ್ಣಪ್ಪ ಅವರ ತೋಟದಲ್ಲಿನ 5 ತೆಂಗಿನ ಮರಗಳು, ಹೇಮಾವತಿ ಅವರ ತೋಟದಲ್ಲಿನ 7 ತೆಂಗಿನ ಮರಗಳು, ರಂಗನಾಥ್ ಮತ್ತು ಪ್ರಹ್ಲಾದ್ ಅವರ ತೋಟದಲ್ಲಿನ ತಲಾ 3 ತೆಂಗಿನ ಮರಗಳು ಸುಟ್ಟು ಹೋಗಿವೆ.

ಕಿಡಿಗೇಡಿಗಳು ತೋಟದ ಬೇಲಿಗೆ ಬೀಡಿ ಅಥವಾ ಸಿಗರೇಟ್ ಸೇದಿ ಬಿಸಾಡಿದ ತುಂಡಿನಿಂದ ಬೆಂಕಿ ಹತ್ತಿರಬಹುದು ಎಂದು ಹೇಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.