ಪುತ್ತೂರು: ಕಾರೊಂದು ರಸ್ತೆ ಬದಿಯ ಕೆಳ ಭಾಗದಲ್ಲಿದ್ದ ಅಡಿಕೆ ತೋಟಕ್ಕೆ ಉರುಳಿದ ಘಟನೆ ಪುತ್ತೂರು-ಈಶ್ವರಮಂಗಲ ರಸ್ತೆಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಗುರುವಾರ ನಡೆದಿದೆ.
ಕೇರಳ ಮೂಲದ ಯುವಕನೊಬ್ಬ ಕುಂಬ್ರದಿಂದ ಈಶ್ವರಮಂಗಲ ಕಡೆಗೆ ಚಲಾಯಿಸುತ್ತಿದ್ದ ಕಾರು ಸಾಂತ್ಯದಲ್ಲಿ ನಿಯಂತ್ರಣ ಕಳೆದುಕೊಂಡು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ರೈ ಅವರ ತೋಟಕ್ಕೆ ಉರುಳಿದೆ.
ಕಾರಿನೊಳಗೆ ಸಿಲುಕಿಕೊಂಡಿದ್ದ ಯುವಕ ಮತ್ತು ಯುವತಿಯನ್ನು ತೋಟದ ಕೆಲಸಗಾರರೊಬ್ಬರು ಹೊರ ತೆಗೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.