ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಅಂಗಡಿಯೊಂದರಲ್ಲಿ ಒಂಟಿ ವೃದ್ಧೆಯ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಎಗರಿಸಲು ಕಳ್ಳರಿಬ್ಬರು ಯತ್ನಿಸಿದ್ದು, ಅವರನ್ನು ಆ ವೃದ್ಧೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಬೆಂಗಳೂರಿನ ಯಶವಂತಪುರ ನಿವಾಸಿಗಳಾದ ರೋಹಿತ್ (25) ಮತ್ತು ಅಶೋಕ್ (25) ಬಂಧಿತ ಆರೋಪಿಗಳು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿರುವ ತ್ರೇಸ್ಯಾಮಾ (60) ಅವರಿಬ್ಬರನ್ನು ಹಿಡಿದುಕೊಟ್ಟ ದಿಟ್ಟ ಮಹಿಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಆರೋಪಿಗಳು ಅಡ್ಡಹೊಳೆಗೆ ಸ್ಕೂಟರ್ನಲ್ಲಿ ಬಂದಿದ್ದರು. ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದರು. ಆದರೆ ಮಹಿಳೆ ಅದಕ್ಕೆ ಅವಕಾಶ ನೀಡಲಿಲ್ಲ’ ಎಂದರು.
‘ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಅನ್ನೂ ಮಂಗಳೂರಿನ ಮಳಿಗೆಯೊಂದರಿಂದ ಕದ್ದಿದ್ದರು. ಟೆಸ್ಟ್ ಡ್ರೈವ್ ನೆಪದಲ್ಲಿ ಸ್ಕೂಟರನ್ನು ಪಡೆದುಕೊಂಡು ಅದನ್ನು ಮರಳಿಸದೇ ಪರಾರಿಯಾಗಿದ್ದರು’ ಎಂದೂ ಅವರು ಮಾಹಿತಿ ನೀಡಿದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.