ADVERTISEMENT

ಕಾಸರಗೋಡು | ಬಂಗಾರದ ಆಭರಣ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 18 ಮೇ 2024, 14:13 IST
Last Updated 18 ಮೇ 2024, 14:13 IST

ಕಾಸರಗೋಡು: ಬಂಗಾರದ ಆಭರಣಗಳ ಸಾಗಣೆ ನಡೆಸಿದ ಆರೋಪದಲ್ಲಿ ಜಿಲ್ಲೆಯ ನಿವಾಸಿಗಳಿಬ್ಬರನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಮುಹಮ್ಮದ್ ರಿಯಾಝ್ ಮತ್ತು ಮುಹಮ್ಮದ್ ನಿಝಾರ್ ಬಂಧಿತರು. ಗುಪ್ತಮಾಹಿತಿ ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ತಲೆದಿಂಬು ಕವರ್ ಮತ್ತು ಹಾರ್ಡ್ ಬೋರ್ಡ್ ಕವರ್‌ಗಳಲ್ಲಿ ಬಚ್ಚಿಟ್ಟುಕೊಂಡು ಆಭರಣವನ್ನು ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT