ADVERTISEMENT

ಪುತ್ತೂರು: ಬಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 13:06 IST
Last Updated 6 ಏಪ್ರಿಲ್ 2024, 13:06 IST
ಭರತ್ ಕುಮ್ಡೇಲು
ಭರತ್ ಕುಮ್ಡೇಲು   

ಪುತ್ತೂರು (ದಕ್ಷಿಣ ಕನ್ನಡ): ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರನ್ನು ಗಡಿಪಾರು ಮಾಡುವ ಆದೇಶವನ್ನು ರಾಜ್ಯ ಹೈಕೋರ್ಟ್‌ ರದ್ದು ಪಡಿಸಿದೆ.

ರಾಜ್ಯ ಸರ್ಕಾರ ಮಾಡಿದ್ದ ಗಡಿಪಾರು ಅದೇಶವನ್ನು ಪ್ರಶ್ನಿಸಿ ಭರತ್ ಕುಮ್ಡೇಲು ಅವರು ಅರ್ಜಿ ಸಲ್ಲಿಸಿದ್ದರು. ಭರತ್ ಅವರ ಪರವಾಗಿ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಗಡಿಪಾರು ಆದೇಶವನ್ನು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT