ADVERTISEMENT

ಎಡನೀರಿನಲ್ಲಿ ಕೃತಿ ಬಿಡುಗಡೆ ನಾಳೆ

​ಪ್ರಜಾವಾಣಿ ವಾರ್ತೆ
Published 17 ಮೇ 2024, 23:25 IST
Last Updated 17 ಮೇ 2024, 23:25 IST

ಬದಿಯಡ್ಕ: ದೇಲಂಪಾಡಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ ಹಾಗೂ ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಮೇ 19ರಂದು ಮಧ್ಯಾಹ್ನ 2ರಿಂದ ನಡೆಯಲಿದೆ.

ಡಾ.ರಮಾನಂದ ಬನಾರಿ ಮತ್ತು ಗಣರಾಜ ಕುಂಬ್ಳೆ ಅವರು ಬರೆದ ತಾಳ ಮದ್ದಳೆ ಒಂದು ಐತಿಹಾಸಿಕ ಅಧ್ಯಯನ ಹಾಗೂ ಚಿಕಿತ್ಸಕ ದೃಷ್ಟಿಯ ಸಂಸ್ಕೃತಿಯ ಸೂತ್ರಧಾರಿ ಡಾ.ರಮಾನಂದ ಬನಾರಿ ಎಂಬ ಕೃತಿಗಳು ಬಿಡುಗಡೆಯಾಗಲಿವೆ. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಕೃತಿ ಬಿಡುಗಡೆ ಮಾಡುವರು. ಕಬ್ಬಿನಾಲೆ ವಸಂತ ಭಾರದ್ವಾಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT