ADVERTISEMENT

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 5:37 IST
Last Updated 24 ಜೂನ್ 2024, 5:37 IST
   

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.

ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು.

ಬೆಳಿಗ್ಗೆ ಇಲ್ಲಿಗೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು.

ADVERTISEMENT

ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.