ADVERTISEMENT

ಚೌಟ– ನಸುಕಿನಲ್ಲಿ ನಗರ ಸುತ್ತಾಟ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 3:04 IST
Last Updated 3 ಏಪ್ರಿಲ್ 2024, 3:04 IST
ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಸೀಗಡಿಯ ದರ ವಿಚಾರಿಸಿದ ಬೃಜೇಶ್ ಚೌಟ
ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಸೀಗಡಿಯ ದರ ವಿಚಾರಿಸಿದ ಬೃಜೇಶ್ ಚೌಟ   

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ನಸುಕಿನಲ್ಲಿ ನಗರ ಸುತ್ತಾಟ ನಡೆಸಿ ಮತಯಾಚಿಸಿದರು. ಇಲ್ಲಿನ ಮೀನುಗಾರಿಕಾ ಬಂದರಿಗೆ ಮಂಗಳವಾರ ಭೇಟಿ ನೀಡಿ ಮೀನುಗಾರರೊಂದಿಗೆ ಕೆಲ ಸಮಯ ಕಳೆದರು.

ಬೃಜೇಶ್ ಅವರ ಜೊತೆ ಮೀನುಗಾರ ಮಹಿಳೆಯರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು. ಬಂದರಿನಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಯುವಕರ ಜೊತೆಯೂ ಚೌಟ ಮಾತುಕತೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT