ಮೂಡುಬಿದಿರೆ: ‘ಕೃತಕ ಬುದ್ಧಿಮತ್ತೆ (ಎ.ಐ.) ತಂತ್ರಜ್ಞಾನದೊಂದಿಗೆ ಸಾಗುವುದು ಅನಿವಾರ್ಯ’ ಎಂದು ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಗಣೇಶ್ ಕೆ. ಹೇಳಿದರು.
ಇಲ್ಲಿನ ಮಿಜಾರು ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯದಲ್ಲಿ ಸೋಮವಾರ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ವೇದಿಕೆ ಹಮ್ಮಿಕೊಂಡಿದ್ದ ‘ನೆಕ್ಸ್ಟ್-ಜೆನ್ ಜರ್ನಲಿಸಂ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಹೊಸದಾಗಿ ಬಂದ ಕೃತಕಬುದ್ಧಿಮತ್ತೆಯು ಪತ್ರಿಕಾರಂಗಕ್ಕೆ ಸವಾಲು. ಐದು ವರ್ಷಗಳ ಹಿಂದೆ ಸ್ವಬುದ್ಧಿಯಿಂದ ವಿಷಯ ರಚನೆ ಮಾಡುತ್ತಿದ್ದ ವರದಿಗಾರ, ಸಂಪಾದಕ, ನಿರೂಪಕನ ಕಾರ್ಯವನ್ನು ಇಂದು ಎ.ಐ. ನಿರ್ವಹಿಸುತ್ತಿದೆ ಎಂದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಶ್ರೀನಿವಾಸ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ನಿಶಾನ್ ಕೋಟ್ಯಾನ್, ಅಭಿವ್ಯಕ್ತಿ ವೇದಿಕೆಯ ವಿದ್ಯಾರ್ಥಿ ಸಂಯೋಜಕ ವೈಶಾಕ್ ಮಿಜಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.