ಬದಿಯಡ್ಕ: ಮುಳ್ಳೇರಿಯ ಸಮೀಪದ ಕಾರ್ಲೆಯ ಪದ್ಮಿನಿ ಎಂಬುವರ ಪುತ್ರ ರಾಜಾ ರಾವ್ (51) ಅವರ ಶವ ದೇಲಂಪಾಡಿಯ ಮರವೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.
ಅವರು ಮಂಗಳವಾರ ರಾತ್ರಿ ಸ್ಕೂಟರ್ನಲ್ಲಿ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಅವರ ಪುತ್ರಿಯ ಮದುವೆ ನಿಗದಿಯಾಗಿತ್ತು. ಬುಧವಾರ ಅವರ ಮನೆಯಲ್ಲಿ ಮದುರಂಗಿ ಶಾಸ್ತ್ರವೂ ನಡೆದಿತ್ತು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.