ಬೆಳ್ತಂಗಡಿ: ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್ಗೆ ಬೊಲೆರೊ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದು ಬಾಲಕಿ ಸಾವಿಗೀಡಾದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ.
ಉಜಿರೆ ಖಾಸಗಿ ಆಂಗ್ಲಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ (10) ಪ್ರಾಣ ಕಳೆದುಕೊಂಡವರು. ಉಜಿರೆ ಮನೆಯಿಂದ ಕಲ್ಮಂಜ ಗ್ರಾಮದ ಕುಡೆಂಚಿಯ ಮೂಲ ಮನೆಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೀಟಿನ ಬಳಿ ಡಿಕ್ಕಿ ಆಗಿದೆ. ಬಾಲಕಿ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ತಂದೆ ಗುರುಪ್ರಸಾದ್ ಉಜಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ. ಸೀಟು-ಕಾಯರ್ತೋಡಿ ರಸ್ತೆಯತ್ತ ಸಾಗಿದ್ದ ವಿಷಯ ತಿಳಿದ ಊರವರು ಹಾಗೂ ವಿದ್ಯುತ್ ಲೈನ್ ಕೆಲಸ ಮಾಡುತ್ತಿದ್ದವರು ವಾಹನ ತಡೆದು ನಿಲ್ಲಿಸಿ ಅದರಲ್ಲಿದ್ದವರನ್ನು ಪೊಲೀಸರಿಗೊಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.