ADVERTISEMENT

ಶಬರಿಮಲೆಗೆ ತೆರಳಿದ್ದ 37 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವು!

​ಪ್ರಜಾವಾಣಿ ವಾರ್ತೆ
Published 18 ಮೇ 2024, 14:41 IST
Last Updated 18 ಮೇ 2024, 14:41 IST
ಸಂದೀಪ್ ಶೆಟ್ಟಿ
ಸಂದೀಪ್ ಶೆಟ್ಟಿ   

ಸುರತ್ಕಲ್: ಶಬರಿಮಲೆಗೆಂದು ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.

ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ ಸಲುವಾಗಿ ಮಗನ ಜತೆ ಶಬರಿಮಲೆಗೆ ತಂಡದೊಂದಿಗೆ ಹೊರಟಿದ್ದು, ಪಂಪಾ ಸ್ನಾನಘಟ್ಟದ ಬಳಿ ತೆರಳುವಾಗ ಹೃದಯಾಘಾತವಾಗಿದೆ.

ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಯುವಕ ಮಂಡಲದ ಪದಾಧಿಕಾರಿಯಾಗಿದ್ದರು. ನಿತ್ಯಾನಂದ ಕೆಟರರ್ಸ್‌ ಅನ್ನು ನಡೆಸುತ್ತಿದ್ದರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.