ADVERTISEMENT

ಕುಕ್ಕೆ: ಬ್ರಹ್ಮಕಲಶೋತ್ಸವ ವಾರ್ಷಿಕ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 14:31 IST
Last Updated 25 ಫೆಬ್ರುವರಿ 2024, 14:31 IST
ರಥೋತ್ಸವ
ರಥೋತ್ಸವ   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಾರ್ಷಿಕ ದಿನದ ಅಂಗವಾಗಿ ಶನಿವಾರ 108 ಸಿಯಾಳ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ರಾತ್ರಿ ದೇವಳದಲ್ಲಿ ದೇವರ ಉತ್ಸವ, ಕಾಶಿಕಟ್ಟೆವರೆಗೆ ದೇವರ ಚಿಕ್ಕ ರಥೋತ್ಸವ (ಪಂಚಮಿ) ನಡೆಯಿತು. ಕ್ಷೇತ್ರದ ಪ್ರಭಾರ ತಂತ್ರಿ ಸೀತಾರಾಮ ಎಡಪಡಿತ್ತಾಯ  ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು  ನಡೆದವು.

ಬ್ರಹ್ಮಕಲಶೋತ್ಸವ ದಿನದ ಅಂಗವಾಗಿ ಕ್ಷೇತ್ರಕ್ಕೆ ಭಕ್ತರೊಬ್ಬರು ₹5 ಲಕ್ಷ ವೆಚ್ಚದಲ್ಲಿ ಹೂವಿನ ಅಲಂಕಾರ ಮಾಡಿಸಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ.ಭಟ್, ಶೋಭಾ ಗಿರಿಧರ್ ಮತ್ತಿತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.