ADVERTISEMENT

ದಕ್ಷಿಣ ಕನ್ನಡ | ನಡುರಾತ್ರಿ ಬಂದ ಮೆಸೇಜ್: ಯುವತಿ ಆತ್ಮಹತ್ನೆಗೆ ಯತ್ನ

ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 0:24 IST
Last Updated 26 ಅಕ್ಟೋಬರ್ 2024, 0:24 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಸುರತ್ಕಲ್ (ದಕ್ಷಿಣ ಕನ್ನಡ): ಇಲ್ಲಿನ ಇಡ್ಯಾ ಗ್ರಾಮದ 21 ವರ್ಷದ ಯುವತಿಯೊಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ADVERTISEMENT

‘ಯುವತಿಯ ಅಣ್ಣ ಕಿಶನ್‌ಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ‘ನಿನ್ನ ತಂಗಿಯನ್ನು ಬಿಡುವುದಿಲ್ಲ’ ಎಂಬ ಸಂದೇಶ ಅ.22ರ ರಾತ್ರಿ 1 ಗಂಟೆ ಸುಮಾರಿಗೆ ಬಂದಿದೆ. ಈ ವಿಷಯವನ್ನು ತಿಳಿದ ಯುವತಿ, ‘ನಾನು ಸತ್ತರೆ ನನ್ನ ಸಾವಿಗೆ ಶಾರೀಕ್ ಮತ್ತು ನೂರ್ಜಹಾನ್ ಕಾರಣ’ ಎಂದು ಡೆತ್‌ನೋಟ್ ಬರೆದಿಟ್ಟು 10 ಡೋಲೊ–650 ಮಾತ್ರೆ ಸೇವಿಸಿದ್ದಾರೆ. ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

‘ಯುವತಿ ಡೆತ್‌ನೋಟ್‌ನಲ್ಲಿ ಹೆಸರು ಉಲ್ಲೇಖಿಸಿರುವ ವ್ಯಕ್ತಿಗಳು ಆಕೆಗೆ ನಿರಂತರ ಬೆದರಿಕೆ ಒಡ್ಡುತ್ತಿದ್ದರು. ಈ ಕುರಿತು ಆಕೆಯ ಕುಟುಂಬಸ್ಥರು ಠಾಣೆಗೆ ದೂರು ಸಹ ನೀಡಿದ್ದರು’ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

‘ಅನ್ಯಕೋಮಿನ ಯುವಕ ಅಶ್ಲೀಲ ಮೆಸೇಜ್ ಕಳುಹಿಸಿ, ಕಿರುಕುಳ ನೀಡಿರುವ ಪರಿಣಾಮ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪೊಲೀಸರ ವೈಫಲ್ಯ ಕಾಣುತ್ತಿದೆ. ಫೇಸ್‌ಬುಕ್ ಮೆಸೆಂಜರ್ ಮೂಲಕ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಯುವಕ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯ ಶಾಸಕ ಡಾ. ವೈ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.