ಮಂಗಳೂರು: ಇಲ್ಲಿನ ಮಣ್ಣಗುಡ್ಡೆಯಲ್ಲಿರುವ ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಜಾಸ್ತಿ ಆಸ್ತಿ ಹೊಂದಿರುವ ದೂರು ಬಂದ ಕಾರಣ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನಿಂದ ಬಂದ ಪೊಲೀಸರ ತಂಡವು ಅವರ ಮನೆ ಹಾಗೂ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದೆ ಎಂದು ಲೋಕಾಯುಕ್ತ ಪೋಲೀಸ್ ಮೂಲಗಳು ತಿಳಿಸಿವೆ.
ಒಂದು ವರ್ಷದಿಂದ ಇಲ್ಲಿನ ಪಾಲಿಕೆ ಆಯುಕ್ತರಾಗಿರುವ ಆನಂದ್ ಅವರಿಗೆ ಈಚೆಗೆ ವರ್ಗಾವಣೆಯಾಗಿತ್ತು. ಯಾವುದೇ ಹುದ್ದೆಯನ್ನು ತೋರಿಸಿರಲಿಲ್ಲ. ಅವರು ಕೆಎಟಿ ಮೊರೆ ಹೋಗಿ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.