ADVERTISEMENT

ಸರ್ವೆ ಅಧಿಕಾರಿಗಳ ಗುರಿಯಾಗಿಸಿ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 6:42 IST
Last Updated 30 ಜೂನ್ 2024, 6:42 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಸರ್ವೆ ಅಧಿಕಾರಿಗಳನ್ನು ಗುರಿಯಾಗಿಸಿ ಲೋಕಾಯುಕ್ತ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.

ಮಂಗಳೂರು, ಉಳ್ಳಾಲ, ಬಂಟ್ವಾಳಗಳಲ್ಲಿ ದಾಳಿ ವೇಳೆ ಮಹತ್ವದ ದಾಖಲೆಗಳು ದೊರಕಿವೆ ಎಂದು ಗೊತ್ತಾಗಿದೆ. ಬೆಳಿಗ್ಗೆ 7 ಗಂಟೆಗೇ ಸರ್ವೇ ಇಲಾಖೆಯ ಕಚೇರಿಗಳಲ್ಲಿ, ಸರ್ವೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮನೆಗಳಲ್ಲಿ ತಪಾಸಣೆ ಆರಂಭಿಸಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT