ADVERTISEMENT

ಬಂಟ್ವಾಳ | ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ: ವಧು ಸಾವು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2024, 12:45 IST
Last Updated 7 ಸೆಪ್ಟೆಂಬರ್ 2024, 12:45 IST
<div class="paragraphs"><p>ಬಿ.ಸಿ.ರೋಡ್ ಬಳಿ ಅಪಘಾತದಲ್ಲಿ ಸಾವಿಗೀಡಾದ ಮಾನಸ ಮತ್ತು ಗಾಯಗೊಂಡ ಅನೀಶ್ ಕೃಷ್ಣ</p></div>

ಬಿ.ಸಿ.ರೋಡ್ ಬಳಿ ಅಪಘಾತದಲ್ಲಿ ಸಾವಿಗೀಡಾದ ಮಾನಸ ಮತ್ತು ಗಾಯಗೊಂಡ ಅನೀಶ್ ಕೃಷ್ಣ

   

ಬಂಟ್ವಾಳ (ದಕ್ಷಿಣ ಕನ್ನಡ): ಇಲ್ಲಿನ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿದ್ದಾರೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಅವರ ಪತ್ನಿ ಮಾನಸ (23) ಸಾವಿಗೀಡಾದವರು. ಗಂಭೀರವಾಗಿ ಗಾಯಗೊಂಡ ಅನಿಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೊ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ಇನ್ನೊಂದು ಬದಿಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸಾರಿಗೆ ನಿಗಮದ ಬಸ್ಸಿಗೆ ಕಾರು ಬಡಿದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಆಯಿತು.

ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ಆಗಿತ್ತು. ಮದುವೆಯಾದ ದೇಂತಡ್ಕ ದೇವಸ್ಥಾನಕ್ಕೆ ದಂಪತಿ ಶನಿವಾರ ಭೇಟಿ ನೀಡಿ ಮಾವನ ಮನೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.

ದಂಪತಿ ಮಂಗಳೂರಿನ ಖಾಸಗಿ ಕಂಪೆನಿಯೊಂದರ ಉದ್ಯೋಗಿಗಳು. ಮೆಲ್ಕಾರ್ ‌ಸಂಚಾರಿ ಠಾಣೆ ಪೋಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಅಪಘಾತ ಸಂಭವಿಸಿದ ಸ್ಥಳದಲ್ಲಿ ಸೇರಿದ ಜನರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.