ADVERTISEMENT

ಪೊಳಲಿ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 14:33 IST
Last Updated 18 ಏಪ್ರಿಲ್ 2024, 14:33 IST
ಬಂಟ್ವಾಳ ತಾಲ್ಲೂಕಿನ ಪೊಳಲಿ ಕ್ಷೇತ್ರಕ್ಕೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗುರುವಾರ ಭೇಟಿ ನೀಡಿ ಮತಯಾಚನೆ ನಡೆಸಿದರು
ಬಂಟ್ವಾಳ ತಾಲ್ಲೂಕಿನ ಪೊಳಲಿ ಕ್ಷೇತ್ರಕ್ಕೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗುರುವಾರ ಭೇಟಿ ನೀಡಿ ಮತಯಾಚನೆ ನಡೆಸಿದರು   

ಬಂಟ್ವಾಳ: ‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವು ದಾಖಲಿಸಲಿದ್ದು, ವಿರೋಧ ಪಕ್ಷಗಳ ಅಪಪ್ರಚಾರ ಕೈಗೂಡುವುದಿಲ್ಲ’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಪೊಳಲಿಯಲ್ಲಿ ಪದ್ಮರಾಜ್ ಪರ ಗುರುವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.‌

ವಕೀಲ ಅಶ್ವನಿಕುಮಾರ್ ರೈ, ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ್ ಜೈನ್, ಕೆ.ಪದ್ಮನಾಭ ರೈ, ಕೆ.ಸಂಜೀವ ಪೂಜಾರಿ, ಅಬ್ಬಾಸ್ ಅಲಿ, ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ಚಂದ್ರಹಾಸ ಪಲ್ಲಿಪಾಡಿ, ಉಮೇಶ ಆಚಾರ್ಯ, ಆಲ್ಬರ್ಟ್‌ ಮಿನೇಜಸ್, ಮಲ್ಲಿಕಾ ಶೆಟ್ಟಿ, ಜಯಂತಿ ವಿ.ಪೂಜಾರಿ, ಮಧುಸೂದನ್ ಶೆಣೈ, ಯುವವಾಹಿನಿ ಘಟಕ ಅಧ್ಯಕ್ಷ ಹರೀಶ ಕೋಟ್ಯಾನ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.