ಮಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಿ.ಆರ್.ರವಿ (54) ಮಂಗಳವಾರ ಇಲ್ಲಿ ನಿಧನರಾದರು.
ಮೂರು ದಿನಗಳ ಹಿಂದೆ ಮಿದುಳಿನಲ್ಲಿ ರಕ್ತಸ್ರಾವಕ್ಕೊಳಗಾಗಿದ್ದ ಅವರನ್ನು ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೈಸೂರಿನವರಾದ ರವಿ ಅವರು 2023ರ ಮಾರ್ಚ್ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವರ ಕುಟುಂಬವು ಬೆಂಗಳೂರಿನಲ್ಲಿ ನೆಲಸಿದ್ದು, ಪತ್ನಿ ಪೂರ್ಣಿಮಾ ಹಾಗೂ ಪುತ್ರ ತೇಜಸ್ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.