ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 4:14 IST
Last Updated 22 ಮಾರ್ಚ್ 2024, 4:14 IST
<div class="paragraphs"><p>ಮಂಗಳೂರು ನಗರದಲ್ಲಿ ಮೋಡ‌ ಕವಿದ ವಾತಾವರಣ</p></div>

ಮಂಗಳೂರು ನಗರದಲ್ಲಿ ಮೋಡ‌ ಕವಿದ ವಾತಾವರಣ

   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಮುಂಜಾನೆ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಹನಿಯಾಗಿ ಮಳೆ ಬೀಳುತ್ತಿದೆ.

ಮಂಗಳೂರು ನಗರದಲ್ಲಿ ಬೆಳಿಗ್ಗೆ ಗುಡುಗು ಮಿಂಚಿನಿಂದೊಡಗೂಡಿ ಸಣ್ಣ ಪ್ರಮಾಣದ ಮಳೆಯಾಗಿದೆ.

ADVERTISEMENT

ಉಳ್ಳಾಲ ತಾಲ್ಲೂಕು ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಪ್ರದೇಶದಲ್ಲಿ ಬೆಳಿಗ್ಗೆ ಮಳೆಯಾಗಿದೆ. ಕೆಲವೆಡೆ ನೀರು ಹರಿದು ಹೋಗಿದೆ. ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಪ್ರದೇಶದಲ್ಲಿ ಜೋರು ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.