ADVERTISEMENT

ಕಾಂಗ್ರೆಸ್ಸಿಗರು ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಶಾಸಕ ಡಾ.ವೈ.ಭರತ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2024, 14:04 IST
Last Updated 22 ಜನವರಿ 2024, 14:04 IST

ಸುರತ್ಕಲ್: ಹಿಂದೂ ಸಮಾಜ ರಾಮ ದೇವರ ಮಂದಿರ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತವಾಗಿದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದರು.

ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು/

ಕರ ಸೇವಕರನ್ನು ಸ್ಮರಿಸುವ ಕಾರ್ಯ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ. ಶ್ರೀರಾಮ ದೇವರು ಅಯೋಧ್ಯೆಯಲ್ಲಿ ವಿರಾಜಮಾನರಾಗಿದ್ದು ಪ್ರತಿಯೊಬ್ಬ ಹಿಂದೂ ಒಂದು ಬಾರಿಯಾದರೂ ಅಲ್ಲಿಗೆ ಭೇಟಿ ನೀಡಬೇಕು ಎಂದು ಅವರು ಹೇಳಿದರು.

ADVERTISEMENT

ರಾಜ್ಯ ಸರ್ಕಾರ ಶಾಲೆಗೆ ರಜೆ ನೀಡದೆ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಕುಟುಂಬದೊಂದಿಗೆ ಈ ಅಪೂರ್ವ ಕಾರ್ಯಕ್ರಮ ವೀಕ್ಷಣೆಯಿಂದ ವಂಚಿತರಾಗಿದ್ದಾರೆ. ಇದಕ್ಕೆ ಮುಂದಿನ ದಿನದಲ್ಲಿ ಕಾಲವೇ ಉತ್ತರಿಸಲಿದೆ. ಕಾಂಗ್ರೆಸ್ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.