ADVERTISEMENT

ಹೆದ್ದಾರಿಗೆ ಉರುಳಿದ ಮರ: ಸಂಚಾರ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 13:35 IST
Last Updated 22 ಮಾರ್ಚ್ 2024, 13:35 IST
ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮುರಿದು ಬಿದ್ದ ಮರವನ್ನು ಸ್ಥಳೀಯರು ತೆರವುಗೊಳಿಸಿದರು
ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮುರಿದು ಬಿದ್ದ ಮರವನ್ನು ಸ್ಥಳೀಯರು ತೆರವುಗೊಳಿಸಿದರು   

ಪುತ್ತೂರು: ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಧೂಪದ ಮರವೊಂದು ಹೆದ್ದಾರಿಗೆ ಬಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ನೂರಾರು ವಾಹನಗಳು ಕೆಲ ಕಾಲ ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದವು.

ಸಂಶುದ್ದೀನ್ ಕುಂಬ್ರ ಮತ್ತು ಈಚು ಮುಡಾಲ ಅವರು ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ಮರದ ಕೊಂಬೆಗಳನ್ನು ತುಂಡರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಅಪಾಯಕಾರಿ ಮರ ತೆರವಿಗೆ ಆಗ್ರಹ: ಬುಡಸಮೇತ ಮುರಿದುಬಿದ್ದ ಧೂಪದ ಮರದ ಪಕ್ಕದಲ್ಲೇ ಅಪಾಯಕಾರಿ ಸ್ಥಿತಿಯಲ್ಲಿ ಬೃಹತ್ ಇನ್ನೊಂದು ಮರವಿದ್ದು, ಆ ಮರವೂ ಮುರಿದು ಬೀಳುವ ಸಂಭವ ಇದೆ. ವಾಹನ ಸಂಚಾರದ ವೇಳೆ ಮರ ಉರುಳಿಬಿದ್ದರೆ ಅನಾಹುತ ಸಂಭವಿಸಲಿದ್ದು, ಅರಣ್ಯ ಇಲಾಖೆಯವರು ಅಪಾಯಕಾರಿ ಮರವನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.