ಮಂಗಳೂರು: ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನಗರದ ರೊಸಾರಿಯೊದಲ್ಲಿ ರಿಕ್ಷಾ ಚಾಲಕರಿಬ್ಬರು ಮೃತಪಟ್ಟಿದ್ದಾರೆ.
ಬುಧವಾರ ರಾತ್ರಿಯೇ ಈ ದುರ್ಘಟನೆ ಸಂಭವಿಸಿದ್ದು, ಗುರುವಾರ ಬೆಳಿಗ್ಗೆ ಗೊತ್ತಾಗಿದೆ.
ಮೃತರನ್ನು ರಿಕ್ಷಾ ಚಾಲಕ ಸಕಲೇಶಪುರದ ದೇವರಾಜ್ ( 51) ಹಾಗೂ ಉಪ್ಪಿನಂಗಡಿಯ ರಾಮಕುಂಜದ ರಾಜು (41) ಎಂದು ಗುರುತಿಸಲಾಗಿದೆ.
ರಿಕ್ಷಾ ತೊಳೆಯಲು ಹೋದ ದೇವರಾಜ್ ಅವರು ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದರು. ವಿದ್ಯುದಾಘಾತಕ್ಕೊಳಗಾದ ಅವರ ರಕ್ಷಣೆಗೆ ರಾಜು ಧಾವಿಸಿದ್ದರು. ಅವರಿಬ್ಬರೂ ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾವೊಂದರಲ್ಲಿ ದಾಖಲಾಗಿವೆ.
ಬುಧವಾರ ರಾತ್ರಿ 9 ಗಂಟೆಯ ವೇಳೆ ಈ ಘಟನೆ ಸಂಭವಿಸಿದ್ದು, ಜೋರು ಮಳೆ ಇದ್ದ ಕಾರಣ ಅಕ್ಕಪಕ್ಕದ ಯಾರಿಗೂ ವಿಷಯ ತಿಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ರೊಸಾರಿಯೊ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವರ ಕುಟುಂಬದ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.