ADVERTISEMENT

ಶ್ರೀಧರ ಹಂದೆ, ರಮೇಶ್ ಆಚಾರ್ಯಗೆ ಯಕ್ಷಮಂಗಳ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 14:21 IST
Last Updated 20 ಜೂನ್ 2024, 14:21 IST
ಶ್ರೀಧರ ಹಂದೆ
ಶ್ರೀಧರ ಹಂದೆ   

ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು  ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನೀಡುವ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ, ಯಕ್ಷಗಾನ ಕಲಾವಿದ ಶ್ರೀಧರ ಹಂದೆ ಹಾಗೂ ತೆಂಕು ಮತ್ತು ಬಡಗುತಿಟ್ಟಿನ ಸ್ತ್ರೀವೇಷ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ರಾಧಾಕೃಷ್ಣ ಕಲ್ಚಾರ್ ಅವರ ‘ಪೀಠಿಕಾ ಪ್ರಕರಣ’ ಕೃತಿ ಆಯ್ಕೆಯಾಗಿದೆ.

ಎಂ.ಕೆ.ರಮೇಶ್ ಆಚಾರ್ಯ

ಯಕ್ಷಮಂಗಳ ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನ ಒಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿದೆ.

ಜಾನಪದ ವಿದ್ವಾಂಸ ಕೆ.ಚಿನ್ನಪ್ಪ ಗೌಡ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್, ಯಕ್ಷಗಾನ ಸಂಘಟಕ ಮುರಳಿ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕ ಧನಂಜಯ ಕುಂಬ್ಳೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಪ್ರಶಸ್ತಿ ವಿಜೇತರ ಹೆಸರುಗಳನ್ನು ಅಂತಿಮಗೊಳಿಸಿದೆ.

ADVERTISEMENT
ರಾಧಾಕೃಷ್ಣ ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥ

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ‌ ಮಾಡಲಾಗುವುದು, ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.