ADVERTISEMENT

ಹರಿಹರ: ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ

ನದಿಯಿಂದ ಜಮೀನಿಗೆ ನೀರು ಹರಿಸದಂತೆ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 15:52 IST
Last Updated 21 ಫೆಬ್ರುವರಿ 2024, 15:52 IST

ಹರಿಹರ: ಮೈಲಾರ ಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ವಿವಿಧ ತಾಲ್ಲೂಕುಗಳ ಕುಡಿಯುವ ನೀರಿನ ಸಲುವಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.

ಕುಡಿಯುವ ನೀರಿನ ತೊಂದರೆ ಇರುವುದರಿಂದ ಹರಿಹರ ತಾಲ್ಲೂಕಿನ ರೈತರು ಪಂಪ್‌ಸೆಟ್‌ಗಳ ಮೂಲಕ ನದಿಯಿಂದ ಜಮೀನಿಗೆ ನೀರು ಹರಿಸುವುದನ್ನು ನಿಷೇಧಿಸಿದೆ. ರೈತರು ಜಮೀನಿಗೆ ನೀರು ಹರಿಸಲೆಂದು ನದಿಗೆ ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳ ತೆರವು ಕಾರ್ಯವೂ ನಡೆಯುತ್ತಿದೆ. ಇದಕ್ಕಾಗಿ ತಾಲ್ಲೂಕಿನ ನದಿ ತೀರದಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT