ಕಡರನಾಯಕನಹಳ್ಳಿ: ಸಮೀಪದ ಎಳೆಹೊಳೆ ಗ್ರಾಮದಲ್ಲಿ ಶನಿವಾರ ಸಾಲದ ಹೊರೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಅಶೋಕ ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಜವಾಬ್ದಾರಿ ವಹಿಸಿಕೊಂಡಿದ್ದ ಅವರು ಮನೆಯ ನಿರ್ವಹಣೆ, ಜಮೀನು ಉಳುಮೆ, ಟ್ರ್ಯಾಕ್ಟರ್ ಖರೀದಿಗೆ ಬ್ಯಾಂಕ್ನಲ್ಲಿ ₹ 4 ಲಕ್ಷ, ವೈಯಕ್ತಿಕವಾಗಿ ₹ 6 ಲಕ್ಷ ಸಾಲ ಮಾಡಿದ್ದರು.
ಸಮರ್ಪಕ ಮಳೆಯಾಗದ ಕಾರಣ ಮೂರು ವರ್ಷಗಳಿಂದ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಶೋಕ್ ಅವರ ತಂದೆ ದೂರು ನೀಡಿದ್ದಾರೆ.
ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.