ಹೊನ್ನಾಳಿ: ತಾಲ್ಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಸೌಭಾಗ್ಯ ನರಸಿಂಹಪ್ಪ (46) ಎಂಬ ಮಹಿಳೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಸೌಭಾಗ್ಯ ಅವರು ಬೇಲಿಮಲ್ಲೂರು ಗ್ರಾಮದ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಮುಖ್ಯ ಅಡುಗೆ ತಯಾರಕರಾಗಿ ಕೆಲಸ ಮಾಡುತ್ತಿದ್ದರು. ಅವರು ಗುರುವಾರ ಶಾಲೆಗೆ ರಜೆ ಹಾಕಿ ಬಿತ್ತನೆ ಕಾರ್ಯಕ್ಕೆ ಹೋಗಲು ಮನೆಯಲ್ಲಿಯೇ ಇದ್ದರು. ಈ ವೇಳೆ ನೀರು ತುಂಬಿಸಲೆಂದು ಮೋಟಾರ್ ಆನ್ ಮಾಡುವಾಗ ವಿದ್ಯುತ್ ಶಾಕ್ನಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅವರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.