ಹರಿಹರ: ಶಿವಶರಣ ಮಾದಾರ ಚೆನ್ನಯ್ಯ ಜಯಂತಿ ಅಂಗವಾಗಿ ಮಾ. 13ರಂದು ಹರಿಹರದ ಸಿದ್ದೇಶ್ವರ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸರ್ವಧರ್ಮ ಸರಳ ಸಾಮೂಹಿಕ ವಿವಾಹ ಹಾಗೂ ಮಾದಿಗರ ಜನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಹರಿಹರ ತಾಲ್ಲೂಕು ಮಾದಿಗ ಸಮಾಜದ ಅಧ್ಯಕ್ಷ ಎಂ.ಎಸ್.ಆನಂದ್ ಕುಮಾರ್ ತಿಳಿಸಿದರು.
ಮಠಾಧೀಶರು, ಧರ್ಮಗುರುಗಳು, ಹಾಲಿ, ಮಾಜಿ ಸಚಿವರು, ಶಾಸಕರು ಭಾಗವಹಿಸುವರು. ವಿವಾಹವಾಗಲು ಇಚ್ಚಿಸುವವರು, ವಯಸ್ಸು, ವಾಸಸ್ಥಳ, ಜಾತಿ, ಮೊದಲ ವಿವಾಹದ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.
ವಿವಾಹವಾದ ದಂಪತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಸೌಲಭ್ಯ ದೊರಕಿಸಲಾಗುವುದು. ಆಸಕ್ತರು ಮಾ.1ರೊಳಗೆ ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ. 7483386695, 7406609623, 7349487591, 9342696588 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.