ಜಗಳೂರು: ತಾಲ್ಲೂಕಿನ ಗೌರೀಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನಾಲ್ವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು, ಗ್ರಾಮದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಕೆಲವು ತಿಂಗಳ ಹಿಂದೆ ಗ್ರಾಮದಲ್ಲಿ ಆರ್ಟಿಐ ಕಾರ್ಯಕರ್ತ ರಾಮಕೃಷ್ಣ ಅವರ ಹತ್ಯೆ ಘಟನೆ ನಡೆದಿತ್ತು. ಸೋಮವಾರ ರಾತ್ರಿ ರಾಮಕೃಷ್ಣ ಅವರ ಸಹೋದರ ಹೇಮಂತ್ ಚಾಕುವಿನಿಂದ ಬಸವನಗೌಡ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಹೇಮಂತ್ ಹಾಗೂ ಆತನ ತಾಯಿ ಬೊಮ್ಮಕ್ಕ ವಿರುದ್ಧ ಕೊಲೆ ಯತ್ನ ದೂರು ದಾಖಲಿಸಲಾಗಿದೆ. ಘಟನೆ ಕಾರಣ ಗೌರೀಪುರ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.