ADVERTISEMENT

ನ್ಯಾಮತಿ: ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಪ್ಪ ನೇಮಕ

​ಪ್ರಜಾವಾಣಿ ವಾರ್ತೆ
Published 24 ಮೇ 2024, 13:31 IST
Last Updated 24 ಮೇ 2024, 13:31 IST
ನರಸಿಂಹಪ್ಪ ಎ.ಕೆ.
ನರಸಿಂಹಪ್ಪ ಎ.ಕೆ.   

ನ್ಯಾಮತಿ: ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ನ್ಯಾಮತಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಗೋವಿನಕೋವಿ ಗ್ರಾಮದ ಎ.ಕೆ.ನರಸಿಂಹಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆಂಚಿಕೊಪ್ಪ ಎಂ.ಎಚ್.ಮಂಜಪ್ಪ ಶುಕ್ರವಾರ ತಿಳಿಸಿದರು.

ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಜಗಳೂರು ಎಚ್.ಕುಬೇರಪ್ಪ ಗೌರಿಪುರ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ. ‘ಭಾರತದ ಪ್ರಜೆಗಳಾಗಿ ಬುದ್ಧ, ಬಸವ, ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಅಂತಹ ಮಹಾನ್ ನಾಯಕರ ತತ್ವ ಸಿದ್ಧಾಂತಗಳಲ್ಲಿ ನಂಬಿಕೆಯಿಟ್ಟು, ಸಮುದಾಯ ಜನರನ್ನು ಸಂಘಟಿಸಿ ಜನಪರ ಕಾಳಜಿಯಿಂದ ಸೇವೆ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT