ನ್ಯಾಮತಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸವಳಂಗ, ಗೋವಿನಕೋವಿ, ಚೀಲೂರು, ಗುಡ್ಡೇಹಳ್ಳಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಭಾನುವಾರ ಸಾಧಾರಣ ಮಳೆಯಾಯಿತು.
ಮುಕ್ಕಾಲು ತಾಸು ಸುರಿದ ಹದ ಮಳೆಯಿಂದ ರೈತರು ಹರ್ಷಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ತಾಲ್ಲೂಕಿನ ಕೆಲವೆಡೆ ಉತ್ತಮ ಮಳೆಯಾದ ಕಾರಣ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಒಂದು ವಾರದಿಂದ ಮಳೆಯಾಗದೆ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ರೈತರು ಆತಂಕಗೊಂಡಿದ್ದರು.
ಮಳೆಯಿಂದ ಮೆಕ್ಕೆಜೋಳಕ್ಕೆ ಅನುಕೂಲವಾಗಿದೆ ಎಂದು ಗೋವಿನಕೋವಿಯ ರೈತ ವಿ.ಎಚ್. ರುದ್ರೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.