ADVERTISEMENT

ತೆಲಂಗಾಣದಲ್ಲಿ ರಾಜ್ಯದ ಗ್ಯಾರಂಟಿ ಯೋಜನೆ ಜನಪ್ರಿಯ: ಶಾಸಕ ದೇವೇಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 15:57 IST
Last Updated 27 ನವೆಂಬರ್ 2023, 15:57 IST
ಜಗಳೂರಿನ ಶಾಸಕ ಬಿ. ದೇವೇಂದ್ರಪ್ಪ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು
ಜಗಳೂರಿನ ಶಾಸಕ ಬಿ. ದೇವೇಂದ್ರಪ್ಪ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು   

ಜಗಳೂರು: ‘ಪಕ್ಕದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ವ್ಯಾಪಕವಾಗಿದ್ದು, ಈ ಬಾರಿ ಅಲ್ಲಿ ಕಾಂಗ್ರೆಸ್  ಅಧಿಕಾರ ಹಿಡಿಯಲಿದೆ’ ಎಂದು ತೆಲಂಗಾಣ ಚುನಾವಣೆಯ ಕಾಂಗ್ರೆಸ್ ವೀಕ್ಷಕ ರಾಗಿ ತೆರಳಿದ್ದ ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆಲಂಗಾಣದ ಮಂಚೆರಿಯಲ್ ಜಿಲ್ಲೆಯ ಚೆನ್ನೂರು ವಿಧಾನಸಭಾ ಕ್ಷೇತ್ರದ ವೀಕ್ಷಕನಾಗಿ ತೆರಳಿ ಪಕ್ಷದ ಸರಣಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದೇನೆ. ಕರ್ನಾಟಕದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ತೆಲಂಗಾಣದಲ್ಲೂ ಪ್ರತಿಧ್ವನಿಸುತ್ತಿವೆ’ ಎಂದರು.

ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಸುತ್ತು ಪ್ರಚಾರ ಕಾರ್ಯಕೈಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಗೌಸ್, ಮಹಾಂತೇಶ್ ಗೂಳೇಶ್, ಅನೂಪ್ ರೆಡ್ಡಿ, ಗಿರೀಶ್, ಬಿಳಿಚೋಡು ಓಮಣ್ಣ, ತಮಲೇಹಳ್ಳಿ ತಿಮ್ಮಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.