ADVERTISEMENT

ಧಾರವಾಡ | 21 ಕೆ.ಜಿ ಗಾಂಜಾ ವಶ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 16:09 IST
Last Updated 17 ಅಕ್ಟೋಬರ್ 2024, 16:09 IST

ಧಾರವಾಡ: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಒಟ್ಟು 21.28 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಲ್ಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಗಾಂಜಾ ಗಿಡ (7.455 ಕೆ.ಜಿ), ಹಾಗೂ ಬಂಡಿವಾಡ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 12 ಗಾಂಜಾ ಗಿಡಗಳನ್ನು (7.40 ಕೆ.ಜಿ) ವಶಪಡಿಸಿಕೊಂಡಿದ್ದಾರೆ. ಸಿಇಎನ್‌ (ಸೈಬರ್‌, ಮಾದಕ ದ್ರವ್ಯ, ಆರ್ಥಿಕ ಅಪರಾಧ) ಠಾಣೆ ಕಾರ್ಯಾಚರಣೆ ನಡೆಸಿದ್ದರು.

ಹುಬ್ಬಳ್ಳಿ ತಾಲ್ಲೂಕಿನ ಶಿ‌ರಗುಪ್ಪಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 28 ಗಾಂಜಾ ಸಸಿಗಳನ್ನು (6.785 ಕೆ.ಜಿ) ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ ಶಿವಯ್ಯ ಅಂದಾನಯ್ಯ ಮಂಟೂರ ಎಂಬುವರನ್ನು ಬಂಧಿಸಿದ್ಧಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾರಣೆ ನಡೆಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.