ನವಲಗುಂದ: ಸಮೀಪದ ಖಣ್ಣೂರ ಶಲವಡಿ ನಡುವೆ ಮೋಟಬಸವೇಶ್ವರ ದೇವಸ್ಥಾನದ ಹತ್ತಿರ ಕ್ರೂಸರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯೆ, ತಡಹಾಳ ಗ್ರಾಮದ ಶಾಂತವ್ವ ಬಸವರಾಜ್ ಮಣ್ಣೂರ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಕ್ರೂಸರ್ ಚಾಲಕ ನಾಗರಾಜ ಶೇಖಪ್ಪ ತೆಗ್ಗಿನಮನಿ (25) ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಲಾಗಿದೆ.
ಪ್ರಶಾಂತ್ ಸುಭಾಸ್ ಮಣ್ಣೂರ, ರತ್ನವ್ವ ಕೋಂ ಸುಭಾಸ್ ಮಣ್ಣೂರ, ಪಾರವ್ವ ಕೋಂ ಶಿವಾನಂದ ಮಣ್ಣೂರ, ಶಕುಂತಲಾ ತಂದೆ ವೀರಪ್ಪ ಮಣ್ಣೂರ ಅವರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನವಲಗುಂದ ಪಿಎಸ್ಐ ಜನಾರ್ಧನ್ ಭಟ್ರಳ್ಳಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.