ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ–ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ ಶುಲ್ಕವಿದೆ’ ಎಂದು ತಿಳಿಸಿದರು.
‘ಆಸಕ್ತರು, ಆನಂದ ಅಸೋಸಿಯೇಟ್ಸ್, ಕರ್ನಾಟಕ ಬ್ಯಾಂಕ್ ಹತ್ತಿರ, ಮರಾಠಾ ಕಾಲೊನಿ, ಧಾರವಾಡ, ಇಲ್ಲಿಗೆ ಭೇಟಿ ನೀಡಬಹುದು. ಮಾಹಿತಿಗೆ ಮೊ: 9343402308, 9611142568 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.
ಭಾವಸಾರ ಸಮಾಜದಿಂದ ಸಮಾವೇಶ
ಹುಬ್ಬಳ್ಳಿ: ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯಿಂದ ನಗರದ ದಾಜೀಬಾನ್ ಪೇಟೆಯ ಜನತಾ ಬಜಾರ್ ಬಳಿಯ ಪಂದಳ ಪ್ಯಾಲೇಸ್ನಲ್ಲಿ ಜುಲೈ 28ರಂದು ಭಾವಸಾರ ಕ್ಷತ್ರಿಯ ಸಮಾಜದ ವಧು– ವರರ ಹಾಗೂ ಪಾಲಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಅತಿಥಿಗಳಾಗಿ ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಮನೀಶ್ ಸುತ್ರಾವೆ, ಮುಖಂಡರಾದ ಪ್ರಕಾಶ ತಿರುಮಲ್ಲೆ, ಮಹೇಶ ಲೋಖಂಡೆ ಆಗಮಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಮೊ: 9449026097 ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾ ಬೇದರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.