ADVERTISEMENT

ಕಲಘಟಗಿ: ಅಗ್ನಿಶಾಮಕ ಠಾಣಾಧಿಕಾರಿಗೆ ಮುಖ್ಯಮಂತ್ರಿ ಪದಕ 

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 14:16 IST
Last Updated 13 ಜೂನ್ 2024, 14:16 IST
 ಅರ್ಜುನ್ ವಿ.ಮಾನೆ 
 ಅರ್ಜುನ್ ವಿ.ಮಾನೆ    

ಕಲಘಟಗಿ: ಪಟ್ಟಣದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣಾಧಿಕಾರಿ ಅರ್ಜುನ್ ವಿ. ಮಾನೆ ಇವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದ್ದಾರೆ.

ಅಗ್ನಿ ಅವಘಡ ಮತ್ತು ವಿಪತ್ತುಗಳಂತಹ ತುರ್ತು ಸಂದರ್ಭದಲ್ಲಿ ನಾಗರಿಕರ ಜೀವರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಉನ್ನತ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಂಗಳವಾರ ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT