ADVERTISEMENT

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ, ಆರೋಪಿ ಸಿಐಡಿ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 22 ಮೇ 2024, 8:33 IST
Last Updated 22 ಮೇ 2024, 8:33 IST
<div class="paragraphs"><p>ಸಿಐಡಿ ಅಧಿಕಾರಿಗಳು&nbsp;ಆರೋಪಿ ಗಿರೀಶ ಸಾವಂತನನ್ನು ವಶಕ್ಕೆ ಪಡೆದರು.</p></div>

ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ ಸಾವಂತನನ್ನು ವಶಕ್ಕೆ ಪಡೆದರು.

   

ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.

ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ADVERTISEMENT

ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಡಿವೈಎಸ್‌ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿತ್ತು. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.