ADVERTISEMENT

ಧಾರವಾಡ: ಕಸ ಸಂಗ್ರಹ ವಾಹನ, ಸಿಬ್ಬಂದಿ ಕೊರತೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2024, 15:56 IST
Last Updated 11 ಫೆಬ್ರುವರಿ 2024, 15:56 IST
ಧಾರವಾಡದ ಹೊಸ ಯಲ್ಲಾಪುರದಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕ
ಧಾರವಾಡದ ಹೊಸ ಯಲ್ಲಾಪುರದಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕ   

ಧಾರವಾಡ: ಕಸ ಸಂಗ್ರಹ ವಾಹನಗಳು ನಗರದ ಕೆಲವು ಬಡಾವಣೆಗಳಿಗೆ ವಾರಕ್ಕೊಮ್ಮೆ ಬರುತ್ತಿವೆ. ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಅವ್ಯಾಹತವಾಗಿದೆ.

ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಹೋಗಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೆಚ್ಚು. ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ದುರ್ನಾತದ ಸಮಸ್ಯೆ ತಪ್ಪಿಲ್ಲ.

‘ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್‌ಗಳ ಖರೀದಿ ನಿಟ್ಟಿನಲ್ಲಿ ‍ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ‘ ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

ADVERTISEMENT

ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.