ADVERTISEMENT

ನವಲಗುಂದ: ಐವರಿಗೆ ಹುಚ್ಚು ನಾಯಿ ಕಡಿತ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 15:57 IST
Last Updated 19 ಮಾರ್ಚ್ 2024, 15:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವಲಗುಂದ: ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದಲ್ಲಿ ಹುಚ್ಚು ನಾಯಿ ಕಡಿತದಿಂದ ನಾಲ್ಕು ವರ್ಷದ ಬಾಲಕಿ ಸೇರಿ ಐವರು ಗಾಯಗೊಂಡಿದ್ದಾರೆ.

ಯಮನೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುಮಾರಗೊಪ್ಪ ಗ್ರಾಮದ ರಸ್ತೆಯಲ್ಲಿ ಜನರು ಓಡಾಡುವಾಗಲೇ ಕಾಣಿಸಿಕೊಂಡ ನಾಯಿ, ಹಲವರಿಗೆ ಕಚ್ಚಿ ಗಾಯಗೊಳಿಸಿದೆ. ಕುರಿಮರಿಗಳಿಗೂ ಕಚ್ಚಿದೆ.

ADVERTISEMENT

ಗಂಭೀರವಾಗಿ ಗಾಯಗೊಂಡ ಮಗುವಿಗೆ ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಉಳಿದ ಗಾಯಾಳುಗಳಿಗೆ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.