ADVERTISEMENT

ಜಿಲ್ಲಾಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 6:17 IST
Last Updated 12 ಜುಲೈ 2024, 6:17 IST
   

ಧಾರವಾಡ: ಸಚಿವ ಸಂತೋಷ್ ಲಾಡ್ ನಗರದ ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೋಗಿಗಳ ಜತೆ ಸಚಿವ ಮಾತನಾಡಿದರು. ವಾರ್ಡ್ ಗಳಲ್ಲಿನ ಸ್ಥಿತಿಗತಿ ವೀಕ್ಷಿಸಿದರು. ಸ್ವಚ್ಛತೆ ಕಾಪಾಡುವಂತೆ ಜಿಲ್ಲಾ ಶಸ್ತಚಿಕಿತ್ಸಕ ಸಂಗಪ್ಪ ಗಾಬಿ ಅವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ, ಜಿಲ್ಲಾ ಆರೋಗ್ಯಧಿಕಾರಿ ಶಶಿ ಪಾಟೀಲ ಇದ್ದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.