ADVERTISEMENT

‘ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’: ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 16:25 IST
Last Updated 6 ಜನವರಿ 2024, 16:25 IST
ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಉದ್ಯಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ  ಮಾತನಾಡಿದರು
ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಉದ್ಯಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ  ಮಾತನಾಡಿದರು   

ಹುಬ್ಬಳ್ಳಿ: ‘ಇಲ್ಲಿನ ಅಶೋಕನಗರ ರೈಲ್ವೆ ಸೇತುವೆಯಿಂದ ಶಕ್ತಿ ಕಾಲೊನಿವರೆಗಿನ 2.4 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು  ಮಾರ್ಚ್ 31ರ ಒಳಗೆ  ಪೂರ್ಣಗೊಳಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.

ವಿಶ್ವೇಶ್ವರ ನಗರದ ಉದ್ಯಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ರಸ್ತೆಯು ಗುಣಮಟ್ಟದಿಂದ ಕೂಡಿರಬೇಕು’ ಎಂದರು. 

ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ಶೀಘ್ರದಲ್ಲಿ ಕಾಮಗಾರಿ ಶುರುವಾಗಲಿದೆ’ ಎಂದು ಹೇಳಿದರು.

ADVERTISEMENT

ಪಾಲಿಕೆ ಸದಸ್ಯ ವೀರಣ್ಣ ಸವಡಿ, ಸಂತೋಷ ಚೌಹಾಣ್, ಬೀರಪ್ಪ ಖಂಡೇಕರ, ಸಿದ್ದು ಮೊಗಲಿಶೆಟ್ಟರ್, ಪಾಲಿಕೆ ನೋಡಲ್ ಅಧಿಕಾರಿ ತುಬಾಕಿ ಬೇವೂರು, ಬಿಜೆಪಿ ವಕ್ತಾರ ರವಿ ನಾಯಕ, ಲೋಕೋಪಯೋಗಿ ಇಲಾಖೆ, ಎಲ್‌ ಆ್ಯಂಡ್‌ ಟಿ, ಪಾಲಿಕೆ  ಅಧಿಕಾರಿಗಳು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.