ADVERTISEMENT

ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿಭೇದಿ: ಪಿಡಿಒ ಪ್ರವೀಣಕುಮಾರ ಗಣಿ ಅಮಾನತು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 13:13 IST
Last Updated 25 ಅಕ್ಟೋಬರ್ 2024, 13:13 IST
<div class="paragraphs"><p>ಪ್ರವೀಣಕುಮಾರ ಗಣಿ </p></div>

ಪ್ರವೀಣಕುಮಾರ ಗಣಿ

   

ಧಾರವಾಡ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣಕುಮಾರ ಗಣಿ ಅವರನ್ನು ಕರ್ತವ್ಯ ಲೋಪದಡಿ ಅಮಾನು ಮಾಡಲಾಗಿದೆ.

ಮುತ್ತಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹಲವರು ವಾಂತಿಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕಲುಷಿತ ಕುಡಿಯುವ ನೀರಿನ ಬಗ್ಗೆ ಪಿಡಿಒ ಗಮನಕ್ಕೆ ತಂದರೂ ಮುಂಜಾಗ್ರತೆ ವಹಿಸದೆ, ಸಾರ್ವಜನಿಕರು ಕಲುಷಿತ ನೀರು ಸೇವನೆಗೆ ಕಾರಣರಾಗಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ADVERTISEMENT

ಪಿಡಿಒ ಅವರನ್ನು ಅಮಾತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟ.ಕೆ ಆದೇಶದಲ್ಲಿ ತಿಳಿಸಿದ್ಧಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.