ನವಲಗುಂದ: ಸತತ ಮಳೆಯಿಂದಾಗಿ ಪಟ್ಟಣದ ಬಸವೇಶ್ವರ ನಗರದ ನಿವಾಸಿ ಗೌರಮ್ಮ ಅನುರಾಜ್ ಕುಂಕುಮಗಾರ ಅವರ ಮನೆಯ ಗೋಡೆ ಕುಸಿದಿದೆ.
ತಾಲ್ಲೂಕಿನ ಬೆಳಹಾರ ಹಾಗೂ ನಾಯಕನೂರಲ್ಲಿ ತಲಾ ಒಂದೊಂದು ಮನೆಗಳ ಗೋಡೆ ಬಿದ್ದಿವೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಜಿಟಿ ಜಿಟಿ ಮಳೆಗೆ ಮನೆಗಳು ಸೋರುತ್ತಿದ್ದು ಜನತೆ ಆತಂಕದಲ್ಲಿದ್ದಾರೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಸಕ ಎನ್.ಎಚ್. ಕೋನರಡ್ಡಿ ಅವರು ಕುಸಿದು ಬಿದ್ದ ಮನೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೇರೆಡೆ ಆಶ್ರಯ ಕಲ್ಪಿಸಬೇಕು ಎಂದು ನಿವಾಸಿಗಳ ಆಗ್ರಹಿಸುತ್ತಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.