ADVERTISEMENT

ರಸ್ತೆ ಬಂದ್ ಮಾಡಿ ಪ್ರತಿಭಟನೆ

ಬರಪೀಡಿತ ಪಟ್ಟಿಯಿಂದ ಅಣ್ಣಿಗೇರಿ ಕೈಬಿಟ್ಟಿದ್ದಕ್ಕೆ ರೈತರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 16:27 IST
Last Updated 15 ಸೆಪ್ಟೆಂಬರ್ 2023, 16:27 IST
ಅಣ್ಣಿಗೇರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರೈತ ಸಂಘದ ಮುಖಂಡರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಅಣ್ಣಿಗೇರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರೈತ ಸಂಘದ ಮುಖಂಡರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಅಣ್ಣಿಗೇರಿ: ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಅಣ್ಣಿಗೇರಿ ತಾಲ್ಲೂಕನ್ನು ಕೈಬಿಟ್ಟಿದ್ದಕ್ಕೆ ಸ್ಥಳೀಯ ರೈತ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಟ್ಟಣದಲ್ಲಿ ಕೆಲಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ವಿವಿಧ ರೈತಪರ ಸಂಘಟನೆಗಳಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ರೈತ ಮುಖಂಡ ಯಲ್ಲಪ್ಪ ಮರಬಸಿ ಹೇಳಿದರು.

ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಮಾತನಾಡಿದರು. ಮುಖಂಡರಾದ ಭಗವಂತಪ್ಪ ಪುಟ್ಟಣ್ಣವರ, ಶಿವಶಂಕರ ಕಲ್ಲೂರ, ಜಯದೇವ ಹೂಗಾರ, ಪ್ರಕಾಶ ಅಂಗಡಿ, ಎ.ಪಿ.ಗುರಿಕಾರ, ದಾವಲಸಾಬ ದರವಾನ, ಶೇಖಣ್ಣ ಸೊಟಕನಾಳ, ಮುತ್ತಪ್ಪ ಹಳ್ಳಿ, ಆರ್.ಪಿ.ಅಳವಂಡಿ, ದೇವಿಂದ್ರಪ್ಪ ಬಡಿಗೇರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.