ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಫೋನ್ ಇನ್ ಕಾರ್ಯಕ್ರಮ: ಡಿಡಿಪಿಐ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 13:18 IST
Last Updated 8 ಫೆಬ್ರುವರಿ 2024, 13:18 IST
ಲಕ್ಷ್ಮೇಶ್ವರದ ತಾಯಿ ಪಾರ್ವತಿ ಮಕ್ಕಳ ಬಳಗದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಬುಧವಾರ ಡಿಡಿಪಿಐ ಎಂ.ಎ. ರಡ್ಡೇರ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಫೋನ್ ಇನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಲಕ್ಷ್ಮೇಶ್ವರದ ತಾಯಿ ಪಾರ್ವತಿ ಮಕ್ಕಳ ಬಳಗದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಬುಧವಾರ ಡಿಡಿಪಿಐ ಎಂ.ಎ. ರಡ್ಡೇರ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಫೋನ್ ಇನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು   

ಲಕ್ಷ್ಮೇಶ್ವರ: ‘ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಫೋನ್ ಇನ್ ಕಾರ್ಯಕ್ರಮ ಬಹಳಷ್ಟು ಮುಖ್ಯವಾದದ್ದು. ವಿದ್ಯಾರ್ಥಿಗಳು ವಿಷಯಗಳಲ್ಲಿ ಕಂಡುಕೊಳ್ಳುವ ಸಮಸ್ಯೆಗಳನ್ನು ಆಯಾ ವಿಷಯಗಳ ಅನುಭವಿ ಸಂಪನ್ಮೂಲ ಶಿಕ್ಷಕರಿಂದ ಪರಿಹರಿಸಿಕೊಂಡು ಮುಂದುವರೆಯಲು ಇದು ಬಹಳಷ್ಟು ಸಹಕಾರಿಯಾಗಿದೆ’ ಎಂದು ಡಿಡಿಪಿಐ ಎಂ.ಎ.ರಡ್ಡೇರ ಅಭಿಪ್ರಾಯಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ವತಿಯಿಂದ ಇಲ್ಲಿನ ಪಿಎಸ್‍ಬಿಡಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೋನ್ ಇನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಿಇಒ ಜಿ.ಎಂ. ಮುಂದಿನಮನಿ ಮಾತನಾಡಿ, ‘2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಶಾಲಾ ಆರಂಭದಿಂದಲೇ ಕ್ರಿಯಾಯೋಜನೆ ಹಾಕಿಕೊಂಡು ಅನುಷ್ಠಾನಕ್ಕೆ ತರಲಾಗುತ್ತಿದೆ’ ಎಂದರು.

ADVERTISEMENT

ಪ್ರೌಢ ವಿಭಾಗದ ಬಿಆರ್ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಭಾಷಾ ಸಂಪನ್ಮೂಲ ಶಿಕ್ಷಕರಾದ ಜೆ.ಡಿ. ಲಮಾಣಿ, ವಾಸುದೇವ ಮಡ್ಲಿ, ಡಿ.ಡಿ. ಲಮಾಣಿ, ಅಶೋಕ ಛತ್ರದ ವಿದ್ಯಾರ್ಥಿಗಳಿಂದ ಪೋನ್ ಕರೆಗಳನ್ನು ಸ್ವೀಕರಿಸಿ ಅವರಿಗೆ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಬಿಆರ್‌ಪಿ ಬಿ.ಎಂ. ಯರಗುಪ್ಪಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಎಸ್.ಡಿ. ಲಮಾಣಿ, ರಾಜೇಶ ಉಮಚಗಿ, ಎಮ್.ಸಿ. ಹಿರೇಮಠ, ದತ್ತಾತ್ರೇಯ ವೈದ್ಯ, ಎಸ್.ಬಿ. ಅಣ್ಣಿಗೇರಿ, ಫ್ರಭುಗೌಡ ಯಕ್ಕಿಕೊಪ್ಪ, ಫಕೀರೇಶ ಚಕಾರದ, ಪ್ರದೀಪ ಶೆಟ್ಟರ್, ಸಿಆರ್‍ಪಿಗಳಾದ ಸತೀಶ್ ಬೋಮಲೆ, ಉಮೇಶ ನೇಕಾರ, ಎನ್.ಎ. ಮುಲ್ಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.