ಗದಗ: ರೋಣ ತಾಲ್ಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ಎಡಿಎಲ್ಆರ್) ವಿ.ಗಿರೀಶ್ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗಜೇಂದ್ರಗಡ ತಾಲ್ಲೂಕಿನ ನೀರಲಕೇರಿ ಗ್ರಾಮದ ಅರುಣ್ ಕುಮಾರ್ ಎಂಬುವರು ಸರ್ವೇಯರ್ ಪರವಾನಗಿ ನವೀಕರಿಸಿಕೊಡುವಂತೆ ವಿ.ಗಿರೀಶ್ ಬಳಿ ಹೋದಾಗ, ಪರವಾನಗಿ ನವೀಕರಣಕ್ಕೆ ₹25 ಸಾವಿರ ಲಂಚ ಕೊಡುವಂತೆ ಕೇಳಿದ್ದರು. ಈ ಸಂಬಂಧ ಅರುಣ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಗಿರೀಶ್ ಅವರು ಭಾನುವಾರ ರಾತ್ರಿ ಗದಗ ನಗರದ ಸಾಯಿಬಾಬ ಗುಡಿಯ ಬಳಿ ₹25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಬಿರಾದಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.