ಕೂಡ್ಲಿಗಿ: ಪಟ್ಟಣದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ–50ರ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಕಾರಿನ ಚಾಲಕ ವಿನಯ್ (27) ಹಾಗೂ ಚೆನ್ನಬಸವ (27) ಎಂದು ಗುರುತಿಸಲಾಗಿದೆ. ಸಚಿನ್, ಗೌತಮ್, ಕಾರ್ತೀಕ್, ಪ್ರಭು ಮತ್ತು ಸಾಗರ್ ಗಾಯಗೊಂಡಿದ್ದಾರೆ.
ಲಿಂಗಸೂಗೂರಿನಿಂದ ಕೇರಳದ ವೈನಾಡಿಗೆ ಹೊರಟಿದ್ದ ಇವರು ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ ಕೂಡ್ಲಿಗಿ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸುತುವೆ ಮೇಲೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.
ಇದರಿಂದ. ಕಾರಿನಲ್ಲಿದ್ದ ಚೆನ್ನಬಸವ ಹಾಗೂ ಕಾರಿನ ಚಾಲಕ ವಿಜಯದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಸಚಿನ್ ಹಾಗೂ ಗೌತಮ್ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರ್ತೀಕ್, ಪ್ರಭು ಹಾಗೂ ಸಾಗರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರಗೆ ಕಳಿಸಲಾಗಿದೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.