ADVERTISEMENT

41 ಕೆ.ಜಿ.ಶ್ರೀಗಂಧ ವಶ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 14:17 IST
Last Updated 5 ಅಕ್ಟೋಬರ್ 2024, 14:17 IST

ಬೇಲೂರು: ತಾಲ್ಲೂಕಿನ ಹಳೇಬೀಡು ಹೋಬಳಿಯ ಕಲ್ಲಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಅರೇಹಳ್ಳಿ ಹೋಬಳಿ ಸಾಣೇನಹಳ್ಳಿ ಗ್ರಾಮದ ರವಿ (28) ಎಂಬಾತನನ್ನು ವಲಯ ಅರಣ್ಯಾಧಿಕಾರಿ ಯತೀಶ್ ನೇತೃತ್ವದ ತಂಡ ಬಂಧಿಸಿದೆ.

ಆರೋಪಿಯಿಂದ 41.1 ಕೆ.ಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅರ್ಜುನ್, ಅರಣ್ಯ ಪಾಲಕರಾದ ವೇದರಾಜು, ಮೋಹನ್, ಸಿಬ್ಬಂದಿ ಚಂದನ್, ಪುಟ್ಟರಾಜು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.